Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:19 - ಕನ್ನಡ ಸಮಕಾಲಿಕ ಅನುವಾದ

19 “ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಸಂಕಟದಿಂದಲೂ ನಿತ್ಯವಾದ ಅಸ್ಥಿಪೀಡನದಿಂದಲೂ ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:19
18 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.


ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.


ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.


ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.


ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ.


ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.


ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.


ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.


ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು