Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:22
17 ತಿಳಿವುಗಳ ಹೋಲಿಕೆ  

ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.


ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’


ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ.


ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು