Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:6 - ಕನ್ನಡ ಸಮಕಾಲಿಕ ಅನುವಾದ

6 ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:6
15 ತಿಳಿವುಗಳ ಹೋಲಿಕೆ  

ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.


ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.


ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ.


ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು