Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:10 - ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:10
19 ತಿಳಿವುಗಳ ಹೋಲಿಕೆ  

ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


“ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.


ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


“ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:


ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.


“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು