Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:19 - ಕನ್ನಡ ಸಮಕಾಲಿಕ ಅನುವಾದ

19 ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:19
28 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


ದೇವರಲ್ಲಿ ಪಕ್ಷಪಾತವಿಲ್ಲ.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?


ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?


ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ.


ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.


ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?


ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.


ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.


ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.


ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?


ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು