Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:22
24 ತಿಳಿವುಗಳ ಹೋಲಿಕೆ  

ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.


ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.


ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ?


ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’ ” ಎಂದನು.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?


ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು