Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:23 - ಕನ್ನಡ ಸಮಕಾಲಿಕ ಅನುವಾದ

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಮನುಷ್ಯನ ಮೇಲೆ ಹೆಚ್ಚು ಗಮನವಿಡುವದೂ ಮನುಷ್ಯನು ಆತನ ನ್ಯಾಯವಿಚಾರಣೆಗೆ ಬರುವದೂ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:23
14 ತಿಳಿವುಗಳ ಹೋಲಿಕೆ  

ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.


“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ನಂಬಿಕೆಯಿಂದ ನ್ಯಾಯವನ್ನು ಹೊರತರುತ್ತಾನೆ.


ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.


ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.


ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?


ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.


ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.


ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು