Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:25 - ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:25
13 ತಿಳಿವುಗಳ ಹೋಲಿಕೆ  

ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.


ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ.


ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.


‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?


ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು