Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:10 - ಕನ್ನಡ ಸಮಕಾಲಿಕ ಅನುವಾದ

10 ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:10
24 ತಿಳಿವುಗಳ ಹೋಲಿಕೆ  

ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.


ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು