Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:11 - ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಕೇಳಿ ಆತನ ಸೇವಾಸಕ್ತರಾದಲ್ಲಿ ತಮ್ಮ ದಿವಸಗಳನ್ನು ಕಳೆವರು ಸುಖದಲ್ಲಿ ತಮ್ಮ ವರುಷಗಳನು ಹರ್ಷಾನಂದದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ ತಮ್ಮ ದಿನಗಳನ್ನು ಸುಖದಲ್ಲಿಯೂ ವರುಷಗಳನ್ನು ಸಂತೋಷದಲ್ಲಿಯೂ ಕಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:11
21 ತಿಳಿವುಗಳ ಹೋಲಿಕೆ  

ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.


“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.


ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು