Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:15 - ಕನ್ನಡ ಸಮಕಾಲಿಕ ಅನುವಾದ

15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:15
10 ತಿಳಿವುಗಳ ಹೋಲಿಕೆ  

ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.


ಆದರೂ ಅವರು ನನ್ನ ಸೇವೆಗೂ, ದೇಶಗಳ ಅರಸರ ಸೇವೆಗೂ ಇರುವ ವ್ಯತ್ಯಾಸವನ್ನು ಇವರು ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು,” ಎಂದು ಹೇಳಿದನು.


ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


ದೇವರ ಸಂತೈಸುವಿಕೆಗಳೂ ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ?


ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.


ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.


ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.


ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು