Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:20 - ಕನ್ನಡ ಸಮಕಾಲಿಕ ಅನುವಾದ

20 ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನಾಂಗಗಳು ಇದ್ದಕ್ಕಿದ್ದಂತೆ ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:20
16 ತಿಳಿವುಗಳ ಹೋಲಿಕೆ  

ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.


ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.


ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!


ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.


ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.


ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು