Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:3 - ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೂರದಿಂದ ಸಂಪಾದಿಸಿದ ನನ್ನ ತಿಳುವಳಿಕೆಯ ಪ್ರಕಾರ ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:3
27 ತಿಳಿವುಗಳ ಹೋಲಿಕೆ  

ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.


ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.


‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?


“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು