Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:19 - ಕನ್ನಡ ಸಮಕಾಲಿಕ ಅನುವಾದ

19 “ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮಗೆ ಕವಿದಿರುವದರಿಂದ ವಾಕ್ಯವನ್ನು ಸರಿಪಡಿಸಿಕೊಳ್ಳಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:19
17 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.


ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.


‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.


“ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?


ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”


ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.


ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.


ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ; ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು?


ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.


“ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?


ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ?


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು