Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:7 - ಕನ್ನಡ ಸಮಕಾಲಿಕ ಅನುವಾದ

7 ಹೀಗೆ ದೇವರು ತಮ್ಮ ಕೃತ್ಯವನ್ನು ಜನರೆಲ್ಲರೂ ತಿಳುಕೊಳ್ಳುವಂತೆ ಮಾಡುತ್ತಾರೆ. ಸ್ವಲ್ಪಕಾಲ ಮನುಷ್ಯರ ದುಡಿಮೆಯನ್ನು ನಿಲ್ಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಜನರೆಲ್ಲರು ಕೆಲಸ ನಿಲ್ಲಿಸುವಂತೆ ಮಾಡುತ್ತಾನೆ ತನ್ನ ಕಾರ್ಯವನು ಅರಿಯುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬನ ಕೈಯನ್ನು ಮುದ್ರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:7
12 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.


ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.


ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.


ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.


ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.


ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.


ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು