Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:15 - ಕನ್ನಡ ಸಮಕಾಲಿಕ ಅನುವಾದ

15 ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; ಅವರ ಹಿಂಸಾಚಾರವೂ ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:15
17 ತಿಳಿವುಗಳ ಹೋಲಿಕೆ  

ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.


ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.


“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.


ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.


ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ.


“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು