Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:22 - ಕನ್ನಡ ಸಮಕಾಲಿಕ ಅನುವಾದ

22 “ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:22
13 ತಿಳಿವುಗಳ ಹೋಲಿಕೆ  

ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.


ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ, ಅವುಗಳಲ್ಲಿ ಹಿಮ ಅಡಗಿಕೊಳ್ಳುತ್ತದೆ.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.


ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು