Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:17
9 ತಿಳಿವುಗಳ ಹೋಲಿಕೆ  

ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.


ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು