Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:19 - ಕನ್ನಡ ಸಮಕಾಲಿಕ ಅನುವಾದ

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:19
18 ತಿಳಿವುಗಳ ಹೋಲಿಕೆ  

ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.


ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು