Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:2 - ಕನ್ನಡ ಸಮಕಾಲಿಕ ಅನುವಾದ

2 “ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡಬಲ್ಲೆ ಎಂದು ನನಗೆ ಗೊತ್ತಿದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:2
25 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಉದ್ದೇಶಿಸಿದ್ದಾರೆ. ಅದನ್ನು ಯಾರು ವ್ಯರ್ಥಪಡಿಸುವರು? ಅವರು ಎತ್ತಿದ ಕೈಯನ್ನು, ಹಿಂದಕ್ಕೆ ತಳ್ಳುವವರು ಯಾರು? ಎಂಬುದೇ.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.


“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.


ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:


ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು