Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:6 - ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:6
28 ತಿಳಿವುಗಳ ಹೋಲಿಕೆ  

ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.


ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು.


ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


“ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು