Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:12 - ಕನ್ನಡ ಸಮಕಾಲಿಕ ಅನುವಾದ

12 ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:12
23 ತಿಳಿವುಗಳ ಹೋಲಿಕೆ  

ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.


“ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?


ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.


ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.


ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.


ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು.


ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು