Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:14 - ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:14
16 ತಿಳಿವುಗಳ ಹೋಲಿಕೆ  

ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು.


ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು