Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:11 - ಕನ್ನಡ ಸಮಕಾಲಿಕ ಅನುವಾದ

11 “ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:11
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.


“ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.


ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.


ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


“ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ; ನಾನು ಮೌನವಾಗಿದ್ದರೂ, ನನ್ನ ನೋವು ನಿವಾರಣೆಯಾಗುವುದಿಲ್ಲ.


“ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; ನನಗೇನಾದರೂ ಆಗಲಿ.


ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.


ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ? ಬೇಸರದ ನನ್ನ ಮಾತುಗಳು ನಿಮಗೆ ಗಾಳಿಮಾತುಗಳೋ?


ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.


ನನ್ನ ಹೃದಯವು ಸಂತಾಪದಿಂದ ಕಾವೇರಿತು. ನಾನು ಧ್ಯಾನವು ಬೆಂಕಿಯಂತೆ ಉರಿಯಿತು. ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು:


‘ನಾನು ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ,


“ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು