Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:18 - ಕನ್ನಡ ಸಮಕಾಲಿಕ ಅನುವಾದ

18 ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಿನಂಪ್ರತಿಯೂ ಅವನ ಮೇಲೆ ಲಕ್ಷ್ಯವಿಟ್ಟು ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:18
14 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.


ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ?


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು