Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:21 - ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:21
29 ತಿಳಿವುಗಳ ಹೋಲಿಕೆ  

ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;


ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.


ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.


ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:


ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.


ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.


ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.


ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು