Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:6 - ಕನ್ನಡ ಸಮಕಾಲಿಕ ಅನುವಾದ

6 ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು ಬರುವನು ಸತ್ಯವಂತನ ಮನೆಮಾರನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:6
20 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; ನನ್ನ ಪ್ರಾರ್ಥನೆಯು ಶುದ್ಧವಾಗಿದೆ.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.


ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,


ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು