Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:17
24 ತಿಳಿವುಗಳ ಹೋಲಿಕೆ  

ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ; ಅದು ಶೂರನು ಓಡಿಬಂದು ನನ್ನ ಮೇಲೆ ದಾಳಿಮಾಡಿದಂತಿದೆ.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.


ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.


ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.


ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ.


ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; ನನ್ನ ಪ್ರಾರ್ಥನೆಯು ಶುದ್ಧವಾಗಿದೆ.


ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ.


ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.


ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.


ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.


“ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?


ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,


ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು