Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:24 - ಕನ್ನಡ ಸಮಕಾಲಿಕ ಅನುವಾದ

24 ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:24
24 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.


“ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”


ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.


ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.


ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.


ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.


ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


“ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.


ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,


ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು