Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:3 - ಕನ್ನಡ ಸಮಕಾಲಿಕ ಅನುವಾದ

3 ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:3
18 ತಿಳಿವುಗಳ ಹೋಲಿಕೆ  

ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?


ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.


“ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?


ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.


ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು