Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:4 - ಕನ್ನಡ ಸಮಕಾಲಿಕ ಅನುವಾದ

4 ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:4
39 ತಿಳಿವುಗಳ ಹೋಲಿಕೆ  

“ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.


ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ.


ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.


ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು; ಪರಿಶುದ್ಧ ದೇವರ ಮಾತುಗಳನ್ನು ನನ್ನ ಅತ್ಯಂತ ಯಾತನೆಯಲ್ಲಿಯೂ ನಾನು ನಿರಾಕರಿಸಲಿಲ್ಲ; ಇದರಿಂದ ಬರುವ ಆನಂದವು ನನಗೆ ಇನ್ನೂ ಇರುವುದು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.


ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.


“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.


ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?


ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ? ಆಕಾಶದಲ್ಲಿನ ಬುದ್ದಲಿಗಳನ್ನು ಸಾಗಿಸುವವರು ಯಾರು?


ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.


ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.


“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ?


ಅದರ ಮೂಗಿನಲ್ಲಿ ಗಾಳ ಇಡುವೆಯಾ? ಅದರ ದವಡೆಗೆ ಮುಳ್ಳಿನಿಂದ ಚುಚ್ಚುವೆಯಾ?


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು