Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:14 - ಕನ್ನಡ ಸಮಕಾಲಿಕ ಅನುವಾದ

14 ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:14
15 ತಿಳಿವುಗಳ ಹೋಲಿಕೆ  

ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.


ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.


ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.


ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ನಾಚಿಕೆ ಇಲ್ಲದ ಜನಾಂಗದವರೇ, ಒಟ್ಟಾಗಿ ಕೂಡಿಕೊಳ್ಳಿರಿ, ನೀವು ಒಟ್ಟಾಗಿ ಕೂಡಿಕೊಳ್ಳಿರಿ,


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು