Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:4 - ಕನ್ನಡ ಸಮಕಾಲಿಕ ಅನುವಾದ

4 ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಚೂರಿವಿುಡತೆ ತಿಂದು ವಿುಕ್ಕದ್ದನ್ನು ಗುಂಪುವಿುಡತೆ ತಿಂದುಬಿಟ್ಟಿತು; ಗುಂಪುವಿುಡತೆ ತಿಂದು ವಿುಕ್ಕದ್ದನ್ನು ಸಣ್ಣವಿುಡತೆ ತಿಂದುಬಿಟ್ಟಿತು; ಸಣ್ಣವಿುಡತೆ ತಿಂದು ವಿುಕ್ಕದ್ದನ್ನು ದೊಡ್ಡವಿುಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಚೂರಿ ಮಿಡತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡತೆ ತಿಂದಿತು. ಗುಂಪು ಮಿಡತೆ ತಿಂದುಬಿಟ್ಟದ್ದನ್ನು ಹಾರುವ ಮಿಡತೆ ತಿಂದಿತು. ಹಾರುವ ಮಿಡತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:4
19 ತಿಳಿವುಗಳ ಹೋಲಿಕೆ  

“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.


ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.


ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.


ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.


“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,


ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.


ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು