Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:5 - ಕನ್ನಡ ಸಮಕಾಲಿಕ ಅನುವಾದ

5 ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಮಲೇರಿದವರೇ, ಎಚ್ಚರಗೊಂಡು ಅಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಅಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದುಹೋಯಿತು. ಆ ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:5
13 ತಿಳಿವುಗಳ ಹೋಲಿಕೆ  

ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.


“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು