Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:9 - ಕನ್ನಡ ಸಮಕಾಲಿಕ ಅನುವಾದ

9 ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:9
10 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು