Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:10 - ಕನ್ನಡ ಸಮಕಾಲಿಕ ಅನುವಾದ

10 ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:10
22 ತಿಳಿವುಗಳ ಹೋಲಿಕೆ  

“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.


ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು.


ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು