Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:17
42 ತಿಳಿವುಗಳ ಹೋಲಿಕೆ  

ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


“ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು?


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.


ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?


ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.


ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.


ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”


ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.


“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು