Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:26 - ಕನ್ನಡ ಸಮಕಾಲಿಕ ಅನುವಾದ

26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:26
41 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.


ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು.


ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.


ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.


ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.


ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.


ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು