Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:30 - ಕನ್ನಡ ಸಮಕಾಲಿಕ ಅನುವಾದ

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:30
16 ತಿಳಿವುಗಳ ಹೋಲಿಕೆ  

ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಆದರೆ ಪಟ್ಟಣದೊಳಗಿಂದ ಹೊಗೆಯ ಸ್ತಂಭ ಸಹಿತವಾಗಿ ಏಳುವುದಕ್ಕೆ ಪ್ರಾರಂಭಿಸಿತು. ಬೆನ್ಯಾಮೀನ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.


ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಇಸ್ರಾಯೇಲರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇನೆಂದರೆ, ಪಟ್ಟಣದಲ್ಲಿಂದ ಮಹಾ ದೊಡ್ಡ ಹೊಗೆಯನ್ನು ಏಳ ಮಾಡುವುದೇ.


ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”


ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು