Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:11 - ಕನ್ನಡ ಸಮಕಾಲಿಕ ಅನುವಾದ

11 ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:11
14 ತಿಳಿವುಗಳ ಹೋಲಿಕೆ  

ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.


ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು