Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:7 - ಕನ್ನಡ ಸಮಕಾಲಿಕ ಅನುವಾದ

7 “ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:7
24 ತಿಳಿವುಗಳ ಹೋಲಿಕೆ  

ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.


ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು