Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:29 - ಕನ್ನಡ ಸಮಕಾಲಿಕ ಅನುವಾದ

29 ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದುಸ್ರ್ಯಾ ದಿಸಿ ಅಪ್ನಾಕ್ಡೆ ಯೆತಲ್ಯಾ ಜೆಜುಕ್ ಬಗುನ್ ಜುವಾಂವಾನ್, “ಬಗಾ ಹೆ ದೆವಾಚೆ ಬೊಕ್ಡು ಜಗಾಚೆ ಪಾಪ್ ಕಾಡುನ್ ಟಾಕ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:29
65 ತಿಳಿವುಗಳ ಹೋಲಿಕೆ  

ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.


ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.


ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.


ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,


ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು