Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:43 - ಕನ್ನಡ ಸಮಕಾಲಿಕ ಅನುವಾದ

43 ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ದುಸ್ರೆಂದಿಸಿ ಜೆಜುನ್ ಗಾಲಿಲಿಯಾಕ್ ಜಾವ್ಚೆ ಮನುನ್ ನಿರ್‍ದಾರ್ ಕರ್ಲ್ಯಾನ್, ತನ್ನಾ ತೆಕಾ ಫಿಲಿಪ್ ಗಾವ್ಲೊ. ತೆಕಾ ಜೆಜುನ್ “ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:43
19 ತಿಳಿವುಗಳ ಹೋಲಿಕೆ  

ಅದಕ್ಕೆ ಫಿಲಿಪ್ಪನು, “ಸ್ವಾಮೀ, ತಂದೆಯನ್ನು ನಮಗೆ ತೋರಿಸಿರಿ, ನಮಗೆ ಅಷ್ಟೇ ಸಾಕು,” ಎಂದನು.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.


ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.


ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.


ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು