Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:51 - ಕನ್ನಡ ಸಮಕಾಲಿಕ ಅನುವಾದ

51 ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:51
55 ತಿಳಿವುಗಳ ಹೋಲಿಕೆ  

ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.


“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.


ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.


ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.


ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.


ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.


ಅವರು ಬಹಳವಾಗಿ ಗಲಿಬಿಲಿಗೊಂಡರು. ಆಗ ಮಿಂಚಿನಂತೆ ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿ ನಿಂತಿದ್ದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.


ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.


ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು