Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:7 - ಕನ್ನಡ ಸಮಕಾಲಿಕ ಅನುವಾದ

7 ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೊ ಲೊಕಾಕ್ನಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲೊ, ಅಶೆ ಸಗ್ಳಿ ಲೊಕಾ ಹಿ ಖಬರ್ ಆಯ್ಕುನ್ ವಿಶ್ವಾಸ್ ಕರುಸಾಟ್ನಿ ಮನುನ್ ತೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:7
16 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.


ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.


ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು