Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:10 - ಕನ್ನಡ ಸಮಕಾಲಿಕ ಅನುವಾದ

10 ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಚೊರ್ ಫಕತ್ ಚೊರುಕ್, ಜಿವಾನಿ ಮಾರುಕ್, ಅನಿ ಹಾಳ್ ಕರುಕ್ ಯೆತಾ, ಮಿಯಾ ತುಮ್ಕಾ ಜಿವ್ ಗಾವುಚೊ ಮನುನ್ ಯೆಲಾ, ಭರ್‍ಪುರ್ ಮಾಪಾನ್ ದಿವ್ಚೆ ಅನಿ ಜಿವ್ ದಿವ್ಚೆ ಮನುನ್ ಯೆಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:10
25 ತಿಳಿವುಗಳ ಹೋಲಿಕೆ  

ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ?


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.


ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು