Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:12 - ಕನ್ನಡ ಸಮಕಾಲಿಕ ಅನುವಾದ

12 ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಜುರಿನ್ ಹೊತ್ತೊ ಮಾನುಸ್ ಕುರ್‍ಬುರ್ ನ್ಹಯ್, ಅನಿ ತಿ ಬಕ್ರಿ ತೆಚಿ ಸ್ವತಾಚಿ ನ್ಹಯ್. ತಸೆಮನುನ್ ಝುಲ್ ಕುತ್ರೆ ಯೆತಲೆ ಬಗಟಲ್ಲ್ಯಾ ತನ್ನಾ ತೊ ಪಳುನ್ ಜಾವ್ನ್ ಸೊಡ್ತಾ, ಅಶೆ ತೆ ಝುಲ್ ಕುತ್ರೆ ತ್ಯಾ ಬಕ್ರ್ಯಾತ್ನಿ ಗುಸುನ್ ಬಕ್ರ್ಯಾಕ್ನಿ ಮೊಡ್ತಾ, ಅನಿ ತಿ ಬಕ್ರಿ ಮಾಳ್ಬರ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:12
15 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.


ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು