Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:21 - ಕನ್ನಡ ಸಮಕಾಲಿಕ ಅನುವಾದ

21 ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಕೆಲವರು - ಇವು ದೆವ್ವಹಿಡಿದವನ ಮಾತುಗಳಲ್ಲ; ದೆವ್ವವು ಕುರುಡರಿಗೆ ಕಣ್ಣುಕೊಡಬಲ್ಲದೇ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಅನಿ ಹುರಲ್ಲೆ, “ಗಿರೊಲಾಗಲ್ಲೊ ಮಾನುಸ್ ಅಸೊ ಬೊಲಿ ನಾ! ಎಕ್ ಗಿರ್‍ಯಾನ್ ಕುಡ್ಡ್ಯಾ ಮಾನ್ಸಾಕ್ ದಿಸಿ ಸರ್ಕೆ ಕರುಕ್ ಹೊತಾ ಕಾಯ್?” ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:21
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?


ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.


ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.


ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು