Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜುದೆವ್ ಲೊಕಾ ತ್ಯೆಚ್ಯಾ ಭೊತ್ಯಾನಿ ಗೊಳಾ ಹೊಲಿ, ಅನಿ, “ಅಮ್ಕಾ ಅನಿ ಕವ್ಡೆ ಪತರ್ ಸಾಂಗಿನಸ್ತಾನಾಚ್ ರ್‍ಹಾತೆಯ್? ಮನುನ್ ಅಮ್ಕಾ ಖರೆಚ್! ಫೊಡುನ್ ಸಾಂಗ್” ತಿಯಾ ಮೆಸ್ಸಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:24
13 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.


ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.


“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.


ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.


ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು