Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:27 - ಕನ್ನಡ ಸಮಕಾಲಿಕ ಅನುವಾದ

27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾಜಿ ಬಕ್ರಿ ಮಾಜೊ ಧನ್ ಆಯಿಕ್ತ್ಯಾತ್ ಮಿಯಾ ತೆಂಕಾ ವಳಕ್ತಾ, ಅನಿ ತೆನಿ ಮಾಜ್ಯಾ ಫಾಟ್ನಾ ಯೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:27
26 ತಿಳಿವುಗಳ ಹೋಲಿಕೆ  

ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.


ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


“ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’


ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು